ಬೆಂಬಲಿಗರು

ಶನಿವಾರ, ಜುಲೈ 13, 2013

ಪಲ್ಮನರಿ ಎಂಬೋಲಿಸಂ ಎಂಬ ಮಾರಣಾಂತಿಕ ಕಾಯಿಲೆ.

ದೇಹದಲ್ಲಿ ರಕ್ತ ಚಲನೆಯಲ್ಲಿ ಇರ ಬೇಕು .ಶುದ್ಧ ರಕ್ತ  ಹೃದಯದಿಂದ ಅಪಧಮನಿಗಳ ಮೂಲಕ ದೇಹದಾದ್ಯಂತ ಚಲಿಸಿ ಆಹಾರ

ಮತ್ತು ಆಮ್ಲಜನಕ ಸರಬರಾಜು ಮಾಡಿದರೆ ,ಅಭಿಧಮನಿಗಳ ಮೂಲಕ ಅಶುದ್ದ ರಕ್ತ ಹೃದಯಕ್ಕೆ ಬಂದು ಅಲ್ಲಿಂದ

ಶುದ್ದೀಕರಣಕ್ಕಾಗಿ ಶ್ವಾಸಕೋಶಕ್ಕೆ ರವಾನೆ ಆಗುವುದು.ಇದು ನಿರಂತರ ಕ್ರಿಯೆ.ಅದೇ ರೀತಿ ರಕ್ತನಾಳಗಳಿಗೆ ಗಾಯವಾದರೆ


ಕೂಡಲೇ ರಕ್ತ ಹೆಪ್ಪು ಗಟ್ಟಿ ರಕ್ತ ಸೋರುವಿಕೆ ನಿಲ್ಲ ಬೇಕು .ಈ ಹೆಪ್ಪು ಗಟ್ಟಲು ಬೇಕಾದ ಕಚ್ಚಾ ವಸ್ತುಗಳು ರಕ್ತದಲ್ಲಿಯೇ


ಅಡಕವಾಗಿವೆ.ಚಲನೆ ಮತ್ತು ಹೆಪ್ಪುಗಟ್ಟುವ ಕ್ರಿಯೆಯ ಸಮತೋಲನ ಆರೋಗ್ಯಕ್ಕೆ ಅತೀ ಆವಶ್ಯ.


ಕೆಲವು ಸಂದರ್ಭಗಳಲ್ಲಿ ಕಾಲಿನ ಮೀನ ಖಂಡದ   ಅಭಿಧಮನಿಗಳಲ್ಲಿ ರಕ್ತ  ಹೆಪ್ಪುಗಟ್ಟುವುದು.ಉದಾ;ರೋಗದಿಂದ ಕಾಲಿನ


ಚಲನೆಯಿಲ್ಲದೆ ಮಲಗಿರುವವರು ( ಮೂಳೆ ಮುರಿತ,ದೊಡ್ಡ ಶಸ್ತ್ರ ಚಿಕಿತ್ಸೆಗೆ ಒಳಗಾದವರು ,),ಹೆಪ್ಪು ಗಟ್ಟುವಿಕೆಯ ಅಂಶ


ಹೆಚ್ಹು ಇರುವ ಗರ್ಬಿಣಿ ಸ್ತ್ರೀಯರು,ಗರ್ಭ ನಿರೋಧಕ ಗುಳಿಗೆ ಸೇವಿಸುವವರು,ಕೆಲವು ಕ್ಯಾನ್ಸರ್ ಕಾಯಿಲೆಯಿಂದ ಬಳಲುವವರು

.

ಇಂತಹವರಲ್ಲಿ ಹೆಪ್ಪುಗಟ್ಟಿದ ರಕ್ತ ದ  ಗಟ್ಟಿ ಅಬಿಧಮನಿಗಳ ಮೂಲಕ ಹೃದಯವನ್ನು ಹಾಯ್ದು ಶ್ವಾಶ ಕೋಶದ  ಅಪಧಮನಿ


ಪ್ರವೇಶಿಸಿ ಶ್ವಾಸ ಕೋಶಕ್ಕೆ ರಕ್ತ ಸಂಚಾರ ವ್ಯತ್ಯಯ ಮಾಡುವುದು.ಇದನ್ನೇ ಪಲ್ಮನರಿ ಎಂಬೋಲಿಸಂ ಎಂದು ವೈದ್ಯಕೀಯ


ಭಾಷೆಯಲ್ಲಿ ಕರೆಯುತ್ತಾರೆ.ಇಲ್ಲಿ ರಕ್ತದ ಗಟ್ಟಿ ಸಾಕಷ್ಟು ದೊಡ್ಡದಿದ್ದರೆ ಶ್ವಾಸ ಕೋಶದ ರಕ್ತ ಸರಬರಾಜು ಸಂಪೂರ್ಣ ನಿಂತು


ಸೆಕೆಂಡುಗಳಲ್ಲಿ ರೋಗಿ ಸಾವನ್ನಪ್ಪುವನು.

ರೋಗ ಲಕ್ಷಣಗಳು 



 ಕಾಲಿನ ರಕ್ತ ನಾಳಗಳಲ್ಲಿ ರಕ್ತ ಹೆಪ್ಪು ಗಟ್ಟಿದರೆ ಕಾಲು ಊದಿ ಕೊಂಡು ನೋವು ಇರಬಹುದು.ಅಥವಾ  ಯಾವುದೇ ಲಕ್ಷಣ


  ಇಲ್ಲದೇ  ಇರಬಹುದು. ಸಂಶಯ ಬಂದಾಗ ಡಾಪ್ಲರ್ ಪರೀಕ್ಷೆಯೆಂಬ



ಸ್ಕ್ಯಾನ್ ಮಾಡಿ ಪತ್ತೆ ಹಚ್ಚ ಬಹುದು.


ಶ್ವಾಸ ಕೋಶದ ರಕ್ತ ನಾಳ ಬ್ಲಾಕ್ ಆದರೆ  ಏಕಾ ಏಕಿ ದಮ್ಮು ಕಟ್ಟುವುದು.ಆಮ್ಲ ಜನಕ ಕಮ್ಮಿಯಾಗಿ ಶರೀರ ನೀಲ ವರ್ಣಕ್ಕೆ



ತಿರುಗಿ ರೋಗಿ ಸಾವನ್ನೂ ಅಪ್ಪ ಬಹುದು .ಆದುದರಿಂದ ಮೇಲೆ ಹೇಳಿದ ವ್ಯಕ್ತಿಗಳಲ್ಲಿ ಯಾವುದೇ ಕಾರಣವಿಲ್ಲದೆ,(ಅಂದರೆ

ಮೊದಲೇ ಅಸ್ಥಮಾ ,ಹೃದಯ ಕಾಯಿಲೆ ಇಲ್ಲದಿದ್ದರೆ ) ದಮ್ಮು ಕಟ್ಟಲು ಶುರುವಾದರೆ ಪಲ್ಮನರಿ ಎಂಬೋಲಿಸಂ ಇರಬಹುದೆಂದು


ಸಂಶಯಿಸ ಬೇಕು. ರೋಗ ಪರೀಕ್ಷಣೆಗೆ  ಸಮಯ ಕೊಟ್ಟರೆ ರಕ್ತ ಪರೀಕ್ಷೆ ,ಸಿ ಟಿ ಸ್ಕ್ಯಾನ್ ,ಎಂ ಅರ ಐ ಸ್ಕ್ಯಾನ್ ಮೂಲಕ


ರೋಗ  ಖಚಿತ ಪಡಿಸಿ ಕೊಳ್ಳ ಬಹುದು .


ಚಿಕಿತ್ಸೆ.

ರೋಗವು ಚಿಕಿತ್ಸೆಗೆ ಸಮಯ ಕೊಟ್ಟರೆ ಕೂಡಲೇ ತುರ್ತು ಚಿಕಿತ್ಸಾ ಕೊಡದಿಯಲ್ಲಿ ಅಮ್ಲನಕ ಕೊಟ್ಟು, ಹೆಪ್ಪು ಕರಗಿಸುವ ಔಷಧಿ

ಆರಂಬಿಸುವರು.

ದೀರ್ಘ ಕಾಲ ಚಲನೆಯಿಲ್ಲದೆ ಇರುವ ರೋಗಿಗಳಿಗೆ ಹೆಪಾರಿನ್ ಎಂಬ ಹೆಪ್ಪು ಪ್ರತಿ ಬಂಧಕ ಔಷಧಿ ಕೊಡುವರು.ಇದರಿಂದ

ಕಾಲಿನಲ್ಲಿ ರಕ್ತ  ಹೆಪ್ಪುಗಟ್ಟುವುದನ್ನು ತಡೆಗಟ್ಟಿ ಪಲ್ಮನರಿ ಎಂಬೋಲಿಸಂ ಬರದಂತೆ ನೋಡಿಕೊಳ್ಳ ಬಹುದು.

ಗಮನಿಸಿ

                ಕೆಲವೊಮ್ಮೆ ಗರ್ಬಿಣಿ ಸ್ತ್ರೀ ಗಳಲ್ಲಿ(ಮತ್ತು ಹೆಪ್ಪುಗಟ್ಟುವ ಆತಂಕವಿರುವ ಇತರರಲ್ಲಿ) ಈ ರೋಗ ಪ್ರಕಟವಾಗಿ 

ನೋಡುವುದರೊಳಗೆ ಸಾವನ್ನಪ್ಪ ಬಹುದು .ಆಗ  ಅದಕ್ಕಿಂತ ಸ್ವಲ್ಪ ಮೊದಲು ಕೊಟ್ಟ ಇಂಜೆಕ್ಷನ್ ,ಅಥವಾ ಇನ್ನಾವುದೋ 

ಮಾಮೂಲಿ ಔಷಧಗಳೋ ಇದಕ್ಕೆ ಕಾರಣ ಎಂದು ರೋಗಿಗಳ ಬಂಧುಗಳು ತಿಳಿಯುವುದುಂಟು.



ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ