ಬೆಂಬಲಿಗರು

ಮಂಗಳವಾರ, ಡಿಸೆಂಬರ್ 12, 2023

ಪಂಚಮಂ ಕಾರ್ಯ ಸಿದ್ದಿ

 ವಾರದ ಹಿಂದೆ  ಒಬ್ಬರು ಬಂದಿದ್ದರು . "ಡಾಕ್ತ್ರೆ ನಾನು ಜ್ವರ ತಲೆನೋವು ಎಂದು "ಗ " ಡಾಕ್ಟರ್ ಬಳಿ ಹೋಗಿದ್ದೆ . ಅವರ ಮದ್ದು ನಾಲ್ಕು ಡೋಸ್ ತಿಂದರೂ ಕಡಿಮೆ ಆಗಿಲ್ಲ ಎಂದು "ಮ " ಅವರ ಬಳಿಗೆ ಹೋದೆ .ಅವರ ಮದ್ದಿನಲ್ಲಿ  ಜ್ವರ ಸ್ವಲ್ಪ ಕಡಿಮೆ ಆಯಿತು ಆದರೂ ಉಷ್ಣ ಆಗಿ ಗ್ಯಾಸ್ತ್ರಿಕ್ ಆಯಿತು .ಹಾಗೆ "ಭಾ "ಅವರ ಬಳಿ ಹೋದೆ ,ಅವರ ಔಷಧಿ ಯಲ್ಲಿ ಏನೂ ಕಮ್ಮಿ ಇಲ್ಲ ,ಎಂದು ಹೋಮಿಯೋ ಡಾಕ್ತ್ರ ಬಳಿ ಚಿಕಿತ್ಸೆ ಮಾಡಿಸಿದೆ . ಹೊಟ್ಟೆ ನೋವು ಹಾಗೇ ಇದೆ ; ನಿಮ್ಮ ಮದ್ದು ನನಗೆ ಹಿಡಿಯುತ್ತದೆ .ಹಾಗೆ ಬಂದೆ "ಅಂದರು . ನಾನು ನಗುತ್ತಾ ಹೇಳಿದೆ ನಿಮಗೆ ಖಂಡಿತಾ ಗುಣ ಆಗುವುದು .ಯಾಕೆಂದರೆ ಹಿರಿಯರು ಹೇಳುವರು 'ಪಂಚಮಂ ಕಾರ್ಯ ಸಿದ್ಧಿ '

ಇಂತಹವರು ಎಲ್ಲಾ ವೃತ್ತಿಯವರ ಬಳಿಗೂ ಬರುವರು . ನಮ್ಮನ್ನು ಸಂತೋಷ ಪಡಿಸಲೋ ಎಂಬಂತೆ ಸ್ವಲ್ಪ ಮಸಾಲೆ ಸೇರಿಸಿ  ನಮ್ಮ ವೃತ್ತಿ ಮಿತ್ರರನ್ನು ತೆಗಳುವರು ,ನಮ್ಮನ್ನು ಹೊಗಳುವರು .ಈ  ಚಕ್ರ ಮುಂದುವರಿಯುವುದು .ರೋಗಿಗಳಿಗೆ ನನ್ನ ಸಲಹೆ ಯಾವಾಗಲೂ ವಿಶ್ವಾಸದಿಂದ ಒಬ್ಬ ವೈದ್ಯರ ಬಳಿಗೆ ಹೋಗ ಬೇಕು . ಆಮೇಲೆ ಅವರ ಉಪಚಾರದಲ್ಲಿ ಏನಾದರೂ ಸಮಸ್ಯೆ ಇದ್ದರೆ ಅವರ ಬಳಿಗೆ ಹೋಗಿ ಪರಿಹರಿಸಿ ಕೊಳ್ಳಬೇಕು . ತುರ್ತು ಪರಿಸ್ಥಿತಿ ಯಲ್ಲಿ ಬೇರೆ ಆಸ್ಪತ್ರೆಗೆ ಹೋಗ ಬಹುದು . ಒಂದು ಎರಡು ದಿನದ ಔಷಧಿ ತೆಗೆದು ಕೊಂಡು ಕೈ ನೋಡುವಾ ಎಂದು ಬಂದವರನ್ನು ನಾನು ವಿನಯದಿಂದ ಮರಳಿ ಕಳುಹಿಸಿದ್ದೇನೆ . ಕೆಲವರಿಗೆ ಇದು ಪಥ್ಯವಾಗದು. ಯಾವುದೇ ವೃತ್ತಿಯವರು ತಮ್ಮ ಬಳಿ ಬಂದು ಅನ್ಯರ ಹಳಿವವರ ಬಗ್ಗೆ ಜಾಗರೂಕ ಇರಬೇಕು .

  ಬಾಲಂಗೋಚಿ : ನಾನು ಐದನೇ ವೈದ್ಯನಾದ ಕಾರಣ ಖಂಡಿತ ಗುಣವಾಗುವುದು ಗಾದೆ ಸುಳ್ಳು ಆಗದಿದ್ದರೆ .ಅದರಂತೆ ಸರ್ಜನ್ ಒಬ್ಬರು ಕ್ಲಿಷ್ಟಕರ ಶಸ್ತ್ರ ಚಿಕಿತ್ಸೆ ಮಾಡುವ ಮೊದಲು ರೋಗಿಗೆ ಧೈರ್ಯ ಹೇಳುತ್ತಾ' ನೀನು ಖಂಡಿತಾ ಗುಣ ಮುಖ ನಾಗುವಿ.ಸರ್ಜರಿ 100% ಸಕ್ಕೆಸ್ಸ್ . "ಎಂದಾಗ ರೋಗಿ ಅದು ಹೇಗೆ ಅಷ್ಟು ಖಡಾಕಡಿ ಹೇಳುವಿರಿ "ಎನ್ನುವರು .ಅದಕ್ಕೆ ವೈದ್ಯರು ವೈದ್ಯ ಶಾಸ್ತ್ರದ ಪ್ರಕಾರ  ಈ ಶಸ್ತ್ರ ಕ್ರಿಯೆಯ ಸಕ್ಸೆಸ್ ರೇಟ್ 10%.ನಾನು ಈಗಾಗಲೇ ಆಪರೇಷನ್ ಮಾಡಿದ ಒಂಭತ್ತು ಮಂದಿ  ಕೊಂಪ್ಲಿ ಕೇಶನ್ ನಿಂದ ದೇವರ ಪಾದ ಸೇರಿದ್ದು ನೀನು ಹತ್ತನೆಯವನು . ಆದುದರಿಂದ ನೀನು ಗುಮಾಮುಖ ನಾಗುವುದು ಶತ ಸಿದ್ಧ 


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ