ಬೆಂಬಲಿಗರು

ಗುರುವಾರ, ಡಿಸೆಂಬರ್ 21, 2023

ಟಿ ಎನ್ ಸೀತಾರಾಂ ಅವರ ನೆನಪಿನ ಪುಟಗಳು

                        



ಬಹಳ ದಿನಗಳ ನಂತರ ಒಂದು ಒಳ್ಳೆಯ ಕೃತಿ ಟಿ ಎನ್ ಸೀತಾರಾಂ ಅವರ ಆತ್ಮ ಚರಿತ್ರೆ 'ನೆನಪಿನ ಪುಟಗಳು " ಓದಿದ ಗುಂಗಿನಲ್ಲಿ ಇದ್ದೇನೆ .ನಿನ್ನೆ ಬಂದ ಪುಸ್ತಕ ಎಂದು ಸಂಜೆ ಗೆ ಒಂದೇ ಉಸಿರಿನಲ್ಲಿ ಎಂಬಂತೆ ಓದಿಸಿ ಕೊಂಡು ಹೋಯಿತು ಎನ್ನ ಬಹುದು 

ಆರಂಭದಲ್ಲಿ '' ಸತ್ಯವನ್ನೇ ಹೇಳುತ್ತೇನೆ .ಬದುಕಿನ ಸರ್ವ ಸತ್ಯಗಳನ್ನೂ ಹೇಳ ಲಾರೆ .ಆದರೆ ಇಲ್ಲಿ ಹೇಳಿರುವುದಷ್ಟೂ ಸತ್ಯ " ಎಂದು ಹೇಳಿ ಕೊಂಡಿದ್ದು ಉದ್ದಕ್ಕೂ  ಓದುವಾಗ ವೇದ್ಯ ವಾಗುವುದು .ಬೆನ್ನುಡಿಯಲ್ಲಿ ಜೋಗಿಯವರು 'ತನ್ನ ಕತೆಯನ್ನು ಮತ್ತೊಬ್ಬರ ಅನುಭವ ಅಗಿಸಲಿಕ್ಕೆ ಪ್ರಾಮಾಣಿಕತೆ ಇದ್ದರೆ ಸಾಕು "ಎಂದು ಬರೆದಿರುವುದು  ಪುಟ ತಿರುವುತ್ತಿದಂತೆ ಆಗುವುದು .

ವಕೀಲ ,ನಾಟಕಕಾರ ,ನಟ ,ನಿರ್ದೇಶಕ ,ಕೃಷಿಕ ,ಸಾಹಿತಿ  ,ಉದ್ಯಮಿ ಮತ್ತು ರಾಜಕಾರಿಣಿ  ಯಾಗಿ ಅವರ ಬದುಕು ವರ್ಣರಂಜಿತ ವಾಗಿ ತೋರಿದರೂ ಎದುರಿಸಿದ (ಆರ್ಥಿಕ ) ಸಂಕಷ್ಟಳೇ ಅಧಿಕ .ಮುಖ್ಯವಾಗಿ ಕೃಷಿಕನಾಗಿ ಟೊಮಾಟೊ .ಮಾವು ಮತ್ತು ಹತ್ತಿ  ಬೆಳೆ ಚೆನ್ನಾಗಿ ಬಂದರೂ ದಿಢೀರ್ ಬೆಳೆ ಕುಸಿತ ,ಅಕಾಲ ಮಳೆಯಿಂದ ಕೈಗೆ ಬಂದದ್ದು ಬಾಯಿಗೆ ಬರಲಿಲ್ಲ ಎಂದು ಆದ ಪ್ರಸಂಗ ,ಸ್ನೇಹಿತನಿಗೆ ಸಹಾಯ ಮಾಡ ಹೋಗಿ ಕೈಗಾರಿಕೆಯ ಉರುಳು ಕೊರಳಿಗೆ ಹಾಕಿ ಕೊಂಡದ್ದು ಇತ್ಯಾದಿ . 

ರಾಜಕೀಯದ ದಿನಗಳ ಬಗ್ಗೆ ಬರೆಯುತ್ತಾ '' ಮೊದಲು ದೇಶಪ್ರೇಮ ದಿಂದ ಜನರನ್ನು ಹತ್ತಿರ ಮಾಡಿ ಕೊಳ್ಳಬೇಕು ,ಆಮೇಲೆ ಪ್ರೀತಿಯಿಂದ ಜನರನ್ನು ಹತ್ತಿರ ಮಾಡಿಕೊಳ್ಳಬೇಕು ಎನ್ನುವುದಿತ್ತು ,ಮುಂದೆ ಸ್ನೇಹ ಜನರನ್ನು ಹತ್ತಿರ ತರುತ್ತದೆ ಎಂದಾಯಿತು .ನಂತರ ಹಣ ಇದ್ದರೆ ಮಾತ್ರ ಜನ ಬರುತ್ತಾರೆ ಎಂದಾಯಿತು .ಒಂದೊಂದು ಎಲೆಕ್ಷನ್ ಗೂ ಬದಲಾವಣೆ ಆಗಿರುವುದನ್ನು ನೋಡುತ್ತಾ ಬಂದಿದ್ದೇನೆ '

'ಜನರ ಪ್ರೀತಿಯೇ ನನ್ನ ಆಸ್ತಿ 'ಎಂಬ ಶೀರ್ಷಿಕೆಯ ಒಂದು ಅಧ್ಯಾಯ ಇದೆ .ಒಟ್ಟಿನಲ್ಲಿ ಇವರು ಆರ್ಥಿಕ  ಐಶ್ವರ್ಯಕ್ಕಿಂತ  ಸ್ನೇಹ  ಸಂಪತ್ತು ಗಳಿಸಿದ್ದೇ ಹೆಚ್ಚು ಮತ್ತು ಅದಕ್ಕೆ ಸಂತಸ ಪಡುತ್ತಾರೆ . 

ಟಿ ಎನ್ ಸೀತಾರಾಂ ಅವರ ಮುಕ್ತ ಮುಕ್ತ ನಾನು ನೋಡಿದ ಬೆರಳೆಣಿಕೆ ಧಾರಾವಾಹಿ ಗಳಲ್ಲಿ ಒಂದು 

(ಕೆಲವು ಮುದ್ರಣ ತಪ್ಪುಗಳು ಇವೆ . ಕೆಲವು ಐತಿಹಾಸಿಕ ವಿವರಗಳೂ .ಉದಾ: ಇಂದಿರಾ ಗಾಂಧಿಯವರ ಚುನಾವಣೆ ಅಸಿಂಧು ತೀರ್ಪು ಕೊಟ್ಟವರು ನ್ಯಾ ಮೂ .ಕೆ ಎಸ್ ಹೆಗ್ಡೆ ಎಂದು ಬರೆದಿದ್ದು ಅದು ನ್ಯಾ ಮೂ ಸಿನ್ಹಾ ಎಂದು ಇರಬೇಕು ಅದೇ ರೀತಿ 1985 ರಲ್ಲಿ ತಾವು ಮುಖ್ಯ ಮಂತ್ರಿ ಆಗಿರುವಾಗ  ನಡೆದ ಲೋಕ ಸಭಾ ಚುನಾವಣೆಯಲ್ಲಿ ರಾಮಕೃಷ್ಣ ಹೆಗ್ಡೆ ಬಾಗಲಕೋಟೆ ಕ್ಷೇತ್ರದಿಂದ ಸಿದ್ದು ನ್ಯಾಮೆ ಗೌಡರೆದುರು ಸೋತರು ಎಂದಿದೆ .ಆಗ ಅವರು ಲೋಕ ಸಭೆಗೆ ಸ್ಪರ್ದಿಸಿರಲಿಲ್ಲ .ಅವರು ಸೋತುದು 1991 ರಲ್ಲಿ  )

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ