ಶರೀರೇ ಜರ್ಜರೀಭೂತೇ ವ್ಯಾಧಿಗ್ರಸ್ತೇ ಕಲೇವರೇ |
ಔಷಧಂ ಜಾನ್ಹವೀ ತೋಯಂ ವೈದ್ಯೋ ನಾರಾಯಣೋ ಹರಿಃ
ಆ ಗಾಗ ಕೇಳಿ ಬರುವ ಶ್ಲೋಕ . ರೋಗ ಗ್ರಸ್ತ ವಾಗಿ ಜರ್ಜರಿತ ಶರೀರ ಜರ್ಜರಿತ ವಾದಾಗ ದೇವರೇ ವೈದ್ಯ ,ಗಂಗಾ ಜಲವೇ ದಿವ್ಯ ಔಷಧ .ಮನುಷ್ಯನಿಗೆ ವಯಸ್ಸಾದಾಗ ಶರೀರ ಶಿಥಿಲ ವಾಗಿ ರೋಗಗಳು ಹುಡುಕಿ ಕೊಂಡು ಬರುತ್ತವೆ .
ವಿನಾ ದೈನ್ಯೇನ ಜೀವಿತಂ ಅನಾಯಸೇನ ಮರಣಂ ಎಂಬ ಮಂತ್ರ ಎಲ್ಲರಿಗೂ ಅಪ್ಯಾಯಮಾನವಾಗಿ ತೋರುವುದು .
ಆದುದರಿಂದ ಅನಾರೋಗ್ಯ ದೂರ ಇಡುವ ಕೆಲವು ಮಾರ್ಗೋಪಾಯ ಗಳನ್ನು ಗಮನಿಸುವ .
ಇದರಲ್ಲಿ ಸುಲಭ (?)ಸಾಧ್ಯ ಸರಿಯಾದ ಸಮತೋಲ ಆಹಾರ ಸೇವನೆ .
ಹಿರಿಯರಿಗೆ ಸಮತೋಲಿತ ಆಹಾರವು ಕಡಿಮೆ ಕ್ಯಾಲೊರಿ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿರಬೇಕು.ನಮ್ಮಲ್ಲಿ ಬಹು ಮಂದಿ ಅಕ್ಕಿ ಗಂಜಿ ,ನೀರು ದೋಸೆ ,ಪುಂಡಿ ಇತ್ಯಾದಿ ಆರೋಗ್ಯಕರ ಆಹಾರ ಎಂದು ಹೇಳುತ್ತಾರೆ .ಆದರೆ ಅಕ್ಕಿಯಲ್ಲಿ ಸಕ್ಕರೆ ಅಥವಾ ಕ್ಯಾಲೋರಿ ಜಾಸ್ತಿ . ಸ್ನಾಯುಗಳ ಸಂರಕ್ಷಣೆಗೆ ಹೆಚ್ಚಿನ ಪ್ರೋಟೀನ್, ಜೀರ್ಣಕ್ರಿಯೆಗೆ ನಾರು, ಹಾಗೂ ಎಲುಬುಗಳ ಆರೋಗ್ಯಕ್ಕಾಗಿ ಅಗತ್ಯವಾದ ವಿಟಮಿನ್ ಮತ್ತು ಖನಿಜಗಳ ಮೇಲೆ ಒತ್ತು ನೀಡಬೇಕು. ಮುಖ್ಯ ಅಂಶಗಳಲ್ಲಿ ಹಣ್ಣುಗಳು, ತರಕಾರಿಗಳು, ಸಂಪೂರ್ಣ ಧಾನ್ಯಗಳು, ಕಡಿಮೆ ಕೊಬ್ಬಿನ ಪ್ರೋಟೀನ್ (ಮೀನು, ಕೋಳಿ, ಬೀನ್ಸ್), ಮತ್ತು ಕಡಿಮೆ ಕೊಬ್ಬಿನ ಹಾಲು ಉತ್ಪನ್ನಗಳು ಸೇರಿವೆ. ಕೊಬ್ಬು, ಉಪ್ಪು ಮತ್ತು ಸಕ್ಕರೆ ಬಳಕೆಯನ್ನು ಕಡಿಮೆ ಮಾಡಬೇಕು. ದೇಹದಲ್ಲಿ ನೀರಿನ ಸಮತೋಲನ ಕಾಪಾಡುವುದು ಅತ್ಯಂತ ಮುಖ್ಯ, ಹಾಗೆಯೇ ಮೃದುವಾದ ಮತ್ತು ಸುಲಭವಾಗಿ ಜೀರ್ಣವಾಗುವ ಆಹಾರಗಳನ್ನು ಸೇವಿಸುವುದು ಒಳ್ಳೆಯದು.

ಕೆಲ ದಿನಗಳ ಹಿಂದೆ ಶ್ರೀಪತಿ ಮೇಷ್ಟು ತೀರಿಕೊಂಡರು .ಆಗ ನಾನು ಪರವೂರಿನಲ್ಲಿ ಇದ್ದೆ . 
